ಬೆಂಗಳೂರು: ಮದುವೆಗೆ ಸಂಬಂಧಪಟ್ಟಂತೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾದುದರಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾನಗರದ ಎರಡನೇ ಅಡ್ಡರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಕಚೇರಿಯೊಂದರಲ್ಲಿ ಸ್ವಾಗತಕಾರಿಣಿ (ರಿಸೆಪ್ಷನಿಸ್ಟ್)ಯಾಗಿದ್ದ ನೇತ್ರಾವತಿ (27) ಆತ್ಮಹತ್ಯೆ ಮಾಡಿಕೊಂಡವರು. ಮದುವೆಗೆ ಸಂಬಂಧಿಸಿದಂತೆ ತಂದೆಯೊಂದಿಗೆ ಜಗಳ ಮಾಡಿಕೊಂಡಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತಂದೆಗೆ ಬರೆದ ಪತ್ರದಲ್ಲಿ, `ನನ್ನಿಂದಾಗಿ ನೀವು ಸಾಯುವುದು ಬೇಡ. ನಾನೇ ಸಾಯುತ್ತೇನೆ~ ಎಂದು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.