ಬೆಂಗಳೂರು: ಮದ್ಯ ಖರೀದಿಸಲು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಅನಿಲ್ (24) ಎಂಬುವರನ್ನು ಕೊಲೆ ಮಾಡಿದ್ದ ಆರೋಪಿ ಶೇಷಾದ್ರಿಪುರದ ಶಿವಕುಮಾರ್ ಎಂಬಾತನನ್ನು ಚರ್ಚ್ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ.
ಕೃತ್ಯವೆಸಗಿದ ನಂತರ ತಲೆಮರೆಸಿಕೊಂಡಿದ್ದ ಶಿವಕುಮಾರ್, ಕಂಠಪೂರ್ತಿ ಕುಡಿದು ಅದರ ಅಮಲಿನಲ್ಲೇ ಎಂ.ಜಿ.ರಸ್ತೆಯಲ್ಲಿ ಓಡಾಡುತ್ತಿದ್ದ. ಆ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕೆ ಹೋಗಿ ವಶಕ್ಕೆ ಪಡೆದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಭಾರತಿನಗರ ಬಳಿಯ ನೆಹರೂಪುರದ ನಿವಾಸಿ ಅನಿಲ್ ಪೇಂಟರ್ ಕೆಲಸ ಮಾಡುತ್ತಿದ್ದರು. ಹೋಟೆಲ್ ಎದುರು ನಿಂತಿದ್ದ ಅವರ ಬಳಿ ಆರೋಪಿಯು, ಕುಡಿಯಲು ಹಣ ಕೇಳಿದ್ದ. ನಿರಾಕರಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಲಾರಂಭಿಸಿದ್ದ. ನಂತರ, ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಆಗ ಆರೋಪಿಯು ಅವರ ಮೇಲೆ ಕಲ್ಲು ಎತ್ತಿಹಾಕಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.