ADVERTISEMENT

ಮಧ್ಯರ್ರಾತಿ 1ರವರೆಗೂ ಮನರಂಜನೆಗೆ ಅವಕಾಶ

ಉದ್ಯಮಿ ಕಿರಣ್‌ ಮಜುಂದಾರ್‌ ಮನವಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 19:30 IST
Last Updated 18 ಡಿಸೆಂಬರ್ 2013, 19:30 IST
ಮಧ್ಯರ್ರಾತಿ 1ರವರೆಗೂ ಮನರಂಜನೆಗೆ ಅವಕಾಶ
ಮಧ್ಯರ್ರಾತಿ 1ರವರೆಗೂ ಮನರಂಜನೆಗೆ ಅವಕಾಶ   

ಬೆಂಗಳೂರು: ರಾಜಧಾನಿಯಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೂ ಮನರಂಜನಾ ಚಟುವಟಿಕೆ ನಡೆಸಲು ಮತ್ತು ಹೋಟೆಲುಗಳನ್ನು ತೆರೆಯಲು ಅವಕಾಶ ನೀಡಬೇಕು ಎಂದು ಬಯೋಕಾನ್‌ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಷಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಜುಂದಾರ್‌ ಷಾ ಅವರು, ಬೆಂಗಳೂರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ನಗರದಲ್ಲಿ ಔದ್ಯಮಿಕ ಚಟುವಟಿಕೆಗಳು ಹೆಚ್ಚುತ್ತಿರುವುದರಿಂದ ರಾತ್ರಿ 1 ಗಂಟೆಯವರೆಗೂ ಮನರಂಜನಾ ಚಟುವಟಿಕೆ ನಡೆಸಲು ಮತ್ತು ಹೋಟೆಲುಗಳನ್ನು ತೆರೆದಿರಲು ಅವಕಾಶ ನೀಡಿ ಎಂದು ಆದೇಶ ಹೊರಡಿಸಬೇಕು ಎಂಬ ಮನವಿಯನ್ನು ಈ ಸಂದರ್ಭದಲ್ಲಿ ಮುಂದಿಟ್ಟರು.

ಮೆಟ್ರೊ ರೈಲು ಯೋಜನೆ ವಿಸ್ತರಣೆ, ಕಬ್ಬನ್‌ ಉದ್ಯಾನ ರಕ್ಷಣೆ ಮತ್ತು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ, ನಗರದ ರಸ್ತೆಗಳ ನಿರ್ವಹಣೆಗೆ ಅನುದಾನ ಬಿಡುಗಡೆ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿಯವರ ಜತೆ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.