ಬೆಂಗಳೂರು: ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನ ಮತ್ತು ವಜ್ರದ ಆಭರಣಗಳನ್ನು ಮನೆ ಕೆಲಸದಾಕೆ ಕಳವು ಮಾಡಿದ ಪ್ರಕರಣ ಬಸವನಗುಡಿಯ ಶ್ರೀರಾಮಮಂದಿರ ರಸ್ತೆಯಲ್ಲಿ ನಡೆದಿದೆ.
ಈ ಬಗ್ಗೆ ಕಮಲಾ ಎಂಬುವವರು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಲ್ಕು ವರ್ಷದಿಂದ ಮನೆಗೆಲಸಕ್ಕೆ ಬರುತ್ತಿದ್ದ ಇಂದಿರಾ ಎಂಬುವವರು ಚಿನ್ನದ ಬಳೆ, ಜುಮುಕಿ, ಕಿವಿಯೋಲೆ, ನೆಕ್ಲೇಸ್ ಮತ್ತು ವಜ್ರದ ಕಿವಿಯೋಲೆಯನ್ನು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.