ADVERTISEMENT

ಮನೆ ನಿರ್ಮಾಣ ಭರವಸೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2012, 19:20 IST
Last Updated 15 ಅಕ್ಟೋಬರ್ 2012, 19:20 IST

ತಲಘಟ್ಟಪುರ: ಕಗ್ಗಲೀಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆಯಿಲ್ಲದ ಕಡುಬಡವರನ್ನು ಗುರುತಿಸಿ ಪಟ್ಟಿಯನ್ನು ನೀಡಿದರೆ ಮನೆಯನ್ನು ನಿರ್ಮಿಸಿ  ಕೊಡುವುದಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ತಿಳಿಸಿದರು. 

ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಲ್ಲಿ ಈಚೆಗೆ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತಿ ಸದಸ್ಯೆ ಮಂಜುಳ ಅಶ್ವತ್ಥ ನಾಯ್ಕ, ತಾಲ್ಲೂಕು ಪಂಚಾಯತಿ ಸದಸ್ಯೆ ಎಲ್ಲಮ್ಮ ನಾರಾಯಣ ಸ್ವಾಮಿ, ಗ್ರಾ.ಪಂ.ಅಧ್ಯಕ್ಷೆ ಮಂಜುಳ ಶಾಮ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಹದೇವ್ ಹಾಜರಿದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.