ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಡೆಂಗೆ ಮತ್ತು ಇತರ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು. ಸೊಳ್ಳೆಗಳ ಉತ್ಪತ್ತಿ ತಾಣ ಗುರುತಿಸಿ, ಔಷಧಿಯಿಂದ ನಾಶಪಡಿಸಲು ಪಾಲಿಕೆಯ ಸೊಳ್ಳೆ ನಿಯಂತ್ರಣ ಸಿಬ್ಬಂದಿ ಪ್ರತಿ ಮನೆಗೂ ಭೇಟಿ ನೀಡುತ್ತಿದ್ದಾರೆ. ಈ ತಂಡದ ಸದಸ್ಯರು ಸಮವಸ್ತ್ರ ಧರಿಸಿ, ಗುರುತಿನ ಚೀಟಿ ಹೊಂದಿರುತ್ತಾರೆಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗಳು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.