ADVERTISEMENT

ಮಹಿಳಾ ಪರ ಬಜೆಟ್ ಮಂಡನೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 19:30 IST
Last Updated 20 ಮಾರ್ಚ್ 2012, 19:30 IST

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಜನಮುಖಿ ಮತ್ತು ಮಹಿಳಾ ಪರವಾಗಿ  ಇರಬೇಕೆಂದು  ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮೀ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಪ್ರಾಧಾನ್ಯ ಕುಟುಂಬಗಳು, ಒಂಟಿ ಮಹಿಳೆಯರು, ದೌರ್ಜನ್ಯಕ್ಕೆ ತುತ್ತಾದವರು, ಎಂ.ಎಫ್.ಐ ಕಿರುಕುಳ ಮತ್ತಿತರ ಕಾರಣಗಳಿಗೆ ಆತ್ಮಹತ್ಯೆಗೆ ಒಳಗಾದ ಕುಟುಂಬಗಳಿಗೆ ವಿಶೇಷ ಬೆಂಬಲ ಯೋಜನೆಯನ್ನು ಮತ್ತು ಸಮರ್ಪಕ ಹಂಚಿಕೆಯ ಮೂಲಕ ಸಾಮಾಜಿಕ ಬದ್ಧತೆಯ ಬಜೆಟ್ ಮಂಡನೆಯಾಗಬೇಕು.

ಹಸಿವು ಮತ್ತು ಅಪೌಷ್ಟಿಕತೆ ಬಗ್ಗೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ 10,000 ವೇತನ ನಿಗದಿ ಪಡಿಸುವುದರ ಜೊತೆಗೆ ಮತ್ತಿತರ ಹಲವಾರು ಬೇಡಿಕೆಗಳನ್ನು ಬಜೆಟ್‌ನಲ್ಲಿ ಮಂಡಿಸಲು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.