ಬೆಂಗಳೂರು: ಬನಶಂಕರಿ ಮಹಿಳಾ ಸಮಾಜದ 44ನೇ ವಾರ್ಷಿಕೋತ್ಸವದ ಅಂಗವಾಗಿ ಏ.1ರಂದು ಜೆಎಸ್ಎಸ್ ಸಭಾಂಗಣದಲ್ಲಿ ಸಂಜೆ 5ಕ್ಕೆ ರಾಮಾಯಣ ಮ್ಯೂಸಿಕಲ್ ಬ್ಯಾಲೆ ನಾಟಕ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಹಿಳಾ ಸಮಾಜದ ಸದಸ್ಯೆ ಮಾಲತಿ ತಿಳಿಸಿದರು.
ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘60 ವರ್ಷ ಮೇಲ್ಪಟ್ಟ ಮಹಿಳೆಯರು 16 ನಿಮಿಷದಲ್ಲಿ ಸಂಪೂರ್ಣ ರಾಮಾಯಣ ನಾಟಕವನ್ನು ಪ್ರಸ್ತುತಪಡಿಸಲಿದ್ದಾರೆ. ಈ ನಾಟಕವನ್ನು ನಟ ಆರ್ಯ ನಿರ್ದೇಶಿಸಿದ್ದಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.