ADVERTISEMENT

ಮಹಿಳೆಯರ ಪಾತ್ರ ನಿರ್ಣಾಯಕ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2012, 19:30 IST
Last Updated 19 ನವೆಂಬರ್ 2012, 19:30 IST

ತಲಘಟ್ಟಪುರ: `ಸಹಕಾರಿ ಕ್ಷೇತ್ರದಲ್ಲಿ ರೈತರು ಮತ್ತು ರೈತ ಮಹಿಳೆಯರು ತೊಡಗಿಸಿಕೊಂಡ ಕಾರಣ ಈ ಕ್ಷೇತ್ರ  ಪ್ರಗತಿ ಸಾಧಿಸಲು ಸಾಧ್ಯವಾಗಿದೆ~ ಎಂದು ರಾಷ್ಟ್ರೀಯ ವಸತಿ ಮಹಾಮಂಡಲದ ಉಪಾಧ್ಯಕ್ಷ ಎಸ್.ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು.

ನೆಟ್ಟಿಗೆರೆ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಹಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಮಹೇಶ್‌ಚಂದ ಮಾತನಾಡಿದರು.

ಎಪಿಎಂಸಿ ನಿರ್ದೇಶಕ ಎನ್.ಎಂ. ವೆಂಕಟೇಶ್, ಸೋಮನಹಳ್ಳಿ ಗ್ರಾ.ಪಂ.ಅಧ್ಯಕ್ಷ ಟಿ.ಮುನಿಕಾಳಪ್ಪ, ತಾ.ಪಂ.ಅಧ್ಯಕ್ಷೆ ಯಲ್ಲಮ್ಮನಾರಾಯಣಸ್ವಾಮಿ, ಸದಸ್ಯೆ ವಿಜಯಲಕ್ಷ್ಮಿ ಶೇಷಾದ್ರಿನಾಯ್ಕ  ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.