ADVERTISEMENT

ಮಹಿಳೆ ಮೇಲೆ ಪೆಲೆಟ್‌ಗನ್‌ನಿಂದ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2018, 19:31 IST
Last Updated 9 ಮಾರ್ಚ್ 2018, 19:31 IST

ಬೆಂಗಳೂರು: ವಿದ್ಯಾರಣ್ಯಪುರ ಬಳಿಯ ರಾಮಚಂದ್ರಪುರದ ಹನುಮಾನ್ ಲೇಔಟ್‌ನಲ್ಲಿ ಶುಕ್ರವಾರ ರಾತ್ರಿ ಇಬ್ಬರು ದುಷ್ಕರ್ಮಿಗಳು ಪೆಲೆಟ್‌ಗನ್‌ನಿಂದ ಮಹಿಳೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಸಿಂಧೂ ಗಾಯಗೊಂಡ ಮಹಿಳೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತಿ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಅಕ್ಕನ ಮನೆಯಲ್ಲಿದ್ದ ತನ್ನ ಮಕ್ಕಳನ್ನು ಕರೆದುಕೊಂಡು ಬರಲು ಸಿಂಧೂ ಹೋಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಏಕಾಏಕಿ ಗುಂಡು ಹಾರಿಸಿದ್ದಾರೆ ಎಂದು ವಿದ್ಯಾರಣ್ಯಪುರ ಪೊಲಿಸರು ತಿಳಿಸಿದರು.

ADVERTISEMENT

‘ಬೆನ್ನಿಗೆ ಗುಂಡು ಹೊಕ್ಕಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ಕೂಡಲೇ ಅವರ ರಕ್ಷಣೆಗೆ ಮುಂದಾದರು. ದುಷ್ಕರ್ಮಿಗಳು ಹೆಲ್ಮೆಟ್‌ ಧರಿಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳಿದ್ದು, ಅವುಗಳ ಡಿವಿಆರ್‌ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.