
ಪ್ರಜಾವಾಣಿ ವಾರ್ತೆಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದೆಲ್ಲೆಡೆ ಮುಂಗಾರು ದುರ್ಬಲಗೊಂಡಿದೆ. ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.