ಬ್ಯಾಂಕಾಕ್(ಎಪಿಎಫ್): ರಾಜಧಾನಿ ಬ್ಯಾಂಕಾಕ್ನಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿ ಕಡಿಮೆಯಾಗದ ಹಿನ್ನೆಲೆಯಲ್ಲಿ ನಾಗರಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಾಕ್ ದಕ್ಷಿಣ ಭಾಗದ 6 ಜಿಲ್ಲೆಗಳನ್ನು ಅಪಾಯದ ವಲಯ ಎಂದು ಭಾನುವಾರ ಸರ್ಕಾರ ಘೋಷಿಸಿದೆ.
ಮೂರು ತಿಂಗಳಿಂದ ಸುರಿಯುತ್ತಿರುವ ಭಾರಿ ಮುಂಗಾರು ಮಳೆಗೆ 350ಕ್ಕೂ ಹೆಚ್ಚು ಮಂದಿ ನಾಗರಿಕರು ಮೃತಪಟ್ಟಿದ್ದಾರೆ. ಅಲ್ಲದೇ ಹಲವು ಮನೆಗಳಿಗೆ ಹಾನಿಯಾಗಿದ್ದು, 9 ದಶಲಕ್ಷ ಜನರ ಜೀವನಕ್ಕೆ ತೊಂದರೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.