ಬೆಂಗಳೂರು: ಕೇಂದ್ರ ಯೋಜನಾ ಆಯೋಗದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬುಧವಾರ ಬೆಳಿಗ್ಗೆ ನವದೆಹಲಿಗೆ ತೆರಳಲಿದ್ದಾರೆ.
ರಾಜ್ಯದ ಯೋಜನಾ ಗಾತ್ರವನ್ನು ನಿರ್ಧರಿಸುವ ಸಂಬಂಧ ಯೋಜನಾ ಆಯೋಗ ಬುಧವಾರ ಮಧ್ಯಾಹ್ನ 3.30ಕ್ಕೆ ಸಭೆ ಕರೆದಿದೆ. ಈ ಹಿನ್ನೆಲೆಯಲ್ಲಿ ಸದಾನಂದಗೌಡ ಅವರು ಮಂಗಳವಾರ ಹಣಕಾಸು ಮತ್ತು ಯೋಜನಾ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ದೆಹಲಿ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪಕ್ಷದ ಹಿರಿಯ ಮುಖಂಡರೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.