ಬೆಂಗಳೂರು: ನಿವೃತ್ತ ಕೆ.ಎ.ಎಸ್ ಅಧಿಕಾರಿ ಡಾ.ಎ.ವಿ. ಪ್ರಸನ್ನ ಅವರನ್ನು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿಯನ್ನಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ.
ದಿವಂಗತ ಡಾ.ವಿ.ಎಸ್.ಆಚಾರ್ಯ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಸನ್ನ ಅವರೇ ಆಪ್ತ ಕಾರ್ಯದರ್ಶಿ ಯಾಗಿ ಕೆಲಸ ನಿರ್ವಹಿಸುತ್ತಿದ್ದರು.
ಸರ್ಕಾರದ ಮುಂದಿನ ಆದೇಶದವರೆಗೂ ಅಥವಾ ಈ ಮುಖ್ಯಮಂತ್ರಿ ಯ ಅವಧಿ ಪೂರ್ಣವಾಗುವವರೆಗೂ ಪ್ರಸನ್ನ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.