ADVERTISEMENT

‘ಮೂಲಪುರುಷ ಯಾರು?’

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 19:26 IST
Last Updated 14 ಏಪ್ರಿಲ್ 2018, 19:26 IST
ಪುರಭವನದ ಎದುರು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು
ಪುರಭವನದ ಎದುರು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು   

ಬೆಂಗಳೂರು: ‘ಜೈನ, ಬೌದ್ಧ, ಕ್ರೈಸ್ತ, ಇಸ್ಲಾಂ ಧರ್ಮಗಳಿಗೆ ಮೂಲಪುರುಷರು ಇದ್ದಾರೆ. ಆದರೆ, ಹಿಂದೂ ಧರ್ಮದ ಮೂಲಪುರುಷ ಯಾರು‘ ಎಂದು ರಾಷ್ಟ್ರೀಯ ನಾಟಕ ಶಾಲೆ, ಬೆಂಗಳೂರು ಕೇಂದ್ರದ ನಿರ್ದೇಶಕ ಸಿ. ಬಸವಲಿಂಗಯ್ಯ ಪ್ರಶ್ನಿಸಿದರು.

ದಲಿತ ಸಂಘಟನೆಗಳ ಒಕ್ಕೂಟವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹಿಂದೂ ಧರ್ಮಕ್ಕೆ ಅಪ್ಪ–ಅಮ್ಮ ಇಲ್ಲ. ಅದೊಂದು ಬದುಕುವ ಕಲೆ ಎಂದು ಹೇಳುವ ಮನುವಾದಿಗಳು, ಸಮಾಜದಲ್ಲಿ ಮನುಸ್ಮೃತಿ ಬಿತ್ತುವ ಕೆಲಸ ಮಾಡುತ್ತಿದ್ದಾರೆ’ ಎಂದರು.

ADVERTISEMENT

ಲೇಖಕ ನಟರಾಜ್‌ ಹುಳಿಯಾರ್‌, ವಿಚಾರವಾದಿ ಡಾ. ನರಸಿಂಹಯ್ಯ, ಒಕ್ಕೂಟದ ಲಕ್ಷ್ಮೀನಾರಾಯಣ ನಾಗವಾರ, ಗೋಪಾಲಕೃಷ್ಣ ಅರಳಹಳ್ಳಿ, ಯಶೋಧ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.