ಮೊಕದ್ದಮೆ ವಾಪಸ್: ಆಕ್ಷೇಪ ಸಲ್ಲಿಸಲು ಹೈಕೋರ್ಟ್ ಸೂಚನೆ
ಪ್ರಜಾವಾಣಿ ವಾರ್ತೆ Published 20 ಡಿಸೆಂಬರ್ 2012, 20:32 IST Last Updated 20 ಡಿಸೆಂಬರ್ 2012, 20:32 IST ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೆಲವು ಕಾರ್ಯಕರ್ತರು ಹಾಗೂ ಶಾಸಕರಾದ ಕಾಂಗ್ರೆಸ್ನ ರಾಮಸ್ವಾಮಿ ಗೌಡ ಮತ್ತು ಜೆಡಿಎಸ್ನ ಸಿ.ಬಿ. ಸುರೇಶ್ ಬಾಬು ಅವರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್, ಸರ್ಕಾರಕ್ಕೆ ಸೂಚನೆ ನೀಡಿದೆ.
ವಕೀಲ ಎನ್.ಪಿ. ಅಮೃತೇಶ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆನಂದ ಬೈರಾರೆಡ್ಡಿ ಮತ್ತು ಬಿ. ಮನೋಹರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಈ ಸೂಚನೆ ನೀಡಿದೆ.