ಬೆಂಗಳೂರು: ಯುಜಿಸಿ ವೇತನ ಶ್ರೇಣಿ ಅನ್ವಯ ಬಾಕಿ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ 15 ಸಾವಿರಕ್ಕಿಂತಲೂ ಅಧಿಕ ಮಂದಿಗೆ 2006ರ ಜೂನ್ 1 ರಿಂದ ಪಾವತಿಸಬೇಕಾಗಿರುವ ಬಾಕಿ ಹಣವನ್ನು ಇದುವರೆಗೆ ನೀಡಿಲ್ಲ ಎಂದು ಸಂಘದ ಅಧ್ಯಕ್ಷ ಟಿ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಭಾಗ್ಯವಾನ ಎಸ್.ಮುದ್ರಿಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಾಕಿ ವೇತನವು ಕೇಂದ್ರ ಸರ್ಕಾರದ ಅನುದಾನವಾಗಿದೆ. ರಾಜ್ಯ ಸರ್ಕಾರ ಅದನ್ನು ನೀಡದೆ ಇರುವುದು ಸರಿಯಲ್ಲ. ಸರ್ಕಾರದ ಶಿಕ್ಷಕ ವಿರೋಧಿ ನೀತಿಯನ್ನು ಖಂಡಿಸಿ ಈ ತಿಂಗಳ ಮೂರನೇ ವಾರದಲ್ಲಿ ಮುಷ್ಕರ ನಡೆಸಲು ಸಂಘವು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.