ಬೆಂಗಳೂರು: `ದೇಶ ಕಟ್ಟುವಿಕೆಯಲ್ಲಿ ರೈತರಂತೆ ಎಂಜಿನಿಯರುಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಪ್ರಸ್ತುತ ಯೋಜನಾ ಶೀಲ ಎಂಜಿನಿಯರುಗಳ ಕೊರತೆಯಿದ್ದು, ತಾಂತ್ರಿಕ ವಿಶ್ವವಿದ್ಯಾಲಯಗಳು ಇದನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿ ಸಬೇಕು~ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಬಿ. ಜೆ. ಪುಟ್ಟಸ್ವಾಮಿ ಅವರು ಹೇಳಿದರು.
ಕನ್ನಡ ಅಭಿವೃದ್ಧಿ ಬಳಗವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿ ನೋತ್ಸವ ಕಾರ್ಯಕ್ರಮವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.
`ತಾಂತ್ರಿಕ ಜ್ಞಾನ ಮತ್ತು ದೂರ ದರ್ಶಿತ್ವಕ್ಕೆ ಹೆಸರಾಗಿರುವ ವಿಶ್ವೇಶ್ವರಯ್ಯ ಅವರು ದಿವಾನರಾಗಿ ನೀಡಿದ ದಕ್ಷ ಆಡಳಿತ ಪ್ರಸ್ತುತ ರಾಜಕೀಯಕ್ಕೆ ಸ್ಫೂರ್ತಿಯಾಗಬೇಕು. ರಾಜ್ಯಕ್ಕೆ ಅವರ ಕೊಡುಗೆ ಅಪಾರ~ ಎಂದು ಶ್ಲಾಘಿಸಿದರು.
ಕೊಳದ ಮಠದ ಶಾಂತವೀರ ಸ್ವಾಮೀಜಿ, `ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವವನ್ನು ಅಕ್ಷರಶ: ಆಳವಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಅವರು ಜೀವನವು ವಿದ್ಯಾರ್ಥಿಗಳಿಗೆ ಆದರ್ಶನೀಯ~ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಂಧ ಕಲಾವಿದರನ್ನು ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.