ADVERTISEMENT

ಯೋಜನೆಗಳ ಸಮರ್ಪಕ ಜಾರಿಗೆ ಬಿಡಿಎ ಅಧ್ಯಕ್ಷರ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2013, 19:52 IST
Last Updated 13 ಜುಲೈ 2013, 19:52 IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಿವಿಧ ವಿಭಾಗಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ಬಿಡಿಎ ಅಧ್ಯಕ್ಷ ಪಿ.ಎನ್.ಶ್ರೀನಿವಾಸಾಚಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದರು.

ಬಿಡಿಎ ವತಿಯಿಂದ ಕೈಗೆತ್ತಿಕೊಂಡಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪರಿಶೀಲನೆ ನಡೆಸಿದ ಅವರು ಪ್ರಾಧಿಕಾರದ ವಿಭಾಗಗಳ ಸಮನ್ವಯದ ಕೊರತೆಯಿಂದ ಯೋಜನೆಗಳು ವಿಳಂಬವಾಗುತ್ತಿವೆ. ಪ್ರಾಧಿಕಾರದ ಭೂ ಸ್ವಾಧೀನ ವಿಭಾಗ, ನಗರ ಯೋಜನಾ ವಿಭಾಗ ಮತ್ತು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಒಟ್ಟಾಗಿ ಯೋಜನೆಗಳ ಸಮರ್ಪಕ ಜಾರಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.