
ಪ್ರಜಾವಾಣಿ ವಾರ್ತೆಹೊಸಕೋಟೆ: `ಯುವಪೀಳಿಗೆ ಸನ್ಮಾ ರ್ಗದಲ್ಲಿ ಮುನ್ನಡೆಯಲು ವಿದ್ಯಾರ್ಥಿ ಜೀವನದಿಂದಲೇ ಶಿಸ್ತು, ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಬೇಕಾದ ಅವಶ್ಯಕತೆಯಿದೆ~ ಎಂದು ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ಜಗದ್ಗುರು ರೇವಣಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ರಜತ ಮಹೋ ತ್ಸವದ ಅಂಗವಾಗಿ ನಿರ್ಮಿಸಲಾದ ನೂತನ ಕೊಠಡಿಗಳನ್ನು ಸೋಮ ವಾರ ಉದ್ಘಾಟಿಸಿ ಮಾತನಾಡಿದರು.
ಜಿ.ಪಂ.ಅಧ್ಯಕ್ಷ ತಿರುವರಂಗ ನಾರಾಯಣಸ್ವಾಮಿ, `ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಕೊಳವೆಬಾವಿ ಕೊರೆಸಲಾ ಗುವುದು~ ಎಂದರು. ವಿಭೂತಿಪುರದ ಮಹಾಂತಲಿಂಗ ಶಿವಾಚಾರ್ಯ ಸ್ವಾಮಿ, ಡಿಡಿಪಿಐ ಎಚ್.ವಿ. ವೆಂಕ ಟೇಶಪ್ಪ, ತಾ.ಪಂ. ಅಧ್ಯಕ್ಷೆ ಪಿ.ರಾಣಿ, ಪುರಸಭೆ ಸದಸ್ಯರಾದ ರವಿ, ತಿಮ್ಮರಾಯಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.