ADVERTISEMENT

ರಸ್ತೆ ದುರಸ್ತಿ ಪಡಿಸಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2013, 20:11 IST
Last Updated 17 ಜುಲೈ 2013, 20:11 IST

ಬೆಂಗಳೂರು: ಕನಕಪುರ ರಸ್ತೆಯ ರಘುವನಹಳ್ಳಿ ಅಡಿಗಾಸ್ ಹೋಟೆಲ್ ಮುಂದಿರುವ ರಸ್ತೆ ಗುಂಡಿ ಯಾರನ್ನಾದರೂ ಬಲಿ ತೆಗೆದುಕೊಳ್ಳಲು ಕಾದಿರುವಂತಿದೆ. ಕಳೆದ ಮೂರು ನಾಲ್ಕು ತಿಂಗಳುಗಳಿಂದ ರಸ್ತೆ ಹಾಳಾಗಿದ್ದರೂ ರಸ್ತೆಯ ದುರಸ್ತಿಗೆ ಅಧಿಕಾರಿಗಳು ಮುಂದಾಗಿಲ್ಲ' ಎಂದು ಕನಕಪುರ ರಸ್ತೆಯ ಬಾಲಾಜಿ ಬಡಾವಣೆ ನಿವಾಸಿ ವಿ.ಕೆ.ಶ್ರೀವತ್ಸ ದೂರಿದ್ದಾರೆ.

`ಇಲ್ಲಿ ಗುಂಡಿಗಳ ಮಧ್ಯೆ ರಸ್ತೆಯನ್ನು ಹುಡುಕಬೇಕಿದೆ. ನಿತ್ಯ ಸುಮಾರು  ಮೂರು ಲಕ್ಷ ವಾಹನಗಳು ಸಂಚರಿಸುವ ಈ ಪ್ರಮುಖ ರಸ್ತೆಯ ನಿರ್ವಹಣೆಗೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿಲ್ಲ. ರಸ್ತೆಯಲ್ಲಿ ನಿತ್ಯ ಐದಾರು ಮಂದಿ ಬೈಕ್ ಸವಾರರು ರಸ್ತೆಯ ಗುಂಡಿಗಳಿಂದಾಗಿ ಬಿದ್ದು ಗಾಯಗೊಳ್ಳುವುದು ಸಾಮಾನ್ಯವಾಗಿದೆ. ರಸ್ತೆಯಲ್ಲಿ ಯಾವುದಾದರು ಭಾರಿ ಅವಘಡ ಸಂಭವಿಸುವ ಮುನ್ನ ಅಧಿಕಾರಿಗಳು ರಸ್ತೆಯನ್ನು ದುರಸ್ತಿಗೊಳಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.