ADVERTISEMENT

ರಾಜನಾಥಸಿಂಗ್‌ ಇಂದು ನಗರಕ್ಕೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2017, 19:30 IST
Last Updated 7 ಅಕ್ಟೋಬರ್ 2017, 19:30 IST
ರಾಜನಾಥಸಿಂಗ್‌ ಇಂದು ನಗರಕ್ಕೆ
ರಾಜನಾಥಸಿಂಗ್‌ ಇಂದು ನಗರಕ್ಕೆ   

ಬೆಂಗಳೂರು: ಕೇಂದ್ರ ಗೃಹ ಸಚಿವ ರಾಜನಾಥಸಿಂಗ್ ಒಂದು ದಿನದ ಭೇಟಿಗಾಗಿ ಭಾನುವಾರ ಬೆಂಗಳೂರಿಗೆ ಬರಲಿದ್ದಾರೆ.

ಬೆಳಿಗ್ಗೆ ಅರಮನೆ ಮೈದಾನದಲ್ಲಿ ನಡೆಯುವ ವಿಶ್ವಕರ್ಮ ಸಮುದಾಯದ ರಾಜ್ಯ ಮಟ್ಟದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.

ಕೇಂದ್ರ ಸಚಿವರುಗಳಾದ ಪ್ರಕಾಶ ಜಾವಡೇಕರ್, ಅನಂತಕುಮಾರ್, ಡಿ.ವಿ. ಸದಾನಂದಗೌಡ ಅವರೂ ಈ ಸಮಾವೇಶಲ್ಲಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ಈಚೆಗೆ ಬಿಜೆಪಿ ಸೇರಿರುವ ಕೆ.ಪಿ. ನಂಜುಂಡಿ ಈ ಸಮಾವೇಶ ಸಂಘಟಿಸುತ್ತಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಸೇರಿದಂತೆ  ಅನೇಕ ನಾಯಕರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.