ADVERTISEMENT

ರಾಜ್ಯದಲ್ಲಿ ಹೂಡಿಕೆಗೆ ಜಪಾನ್‍ ಆಸಕ್ತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 18:31 IST
Last Updated 5 ಫೆಬ್ರುವರಿ 2019, 18:31 IST

ಬೆಂಗಳೂರು: ದೆಹಲಿಯಲ್ಲಿರುವ ಜಪಾನ್‍ನ ರಾಯಭಾರಿ ಕೆಂಜಿ ಹಿರಾಮತ್ಸು ನೇತೃತ್ವದ ನಿಯೋಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ನಗರದ ಪೆರಿಫೆರಲ್ ವರ್ತುಲ ರಸ್ತೆ, ಎಲಿವೇಟೆಡ್ ಕಾರಿಡಾರ್, ಮೆಟ್ರೊ ಯೋಜನೆಗಳ ಅನುಷ್ಠಾನ ಹಾಗೂ ನಿರ್ವಹಣೆಯ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ ಅವರು, ‘ತುಮಕೂರಿನ ವಸಂತನರಸಾಪುರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಕೈಗಾರಿಕಾ ಪ್ರದೇಶದಲ್ಲಿ ಜಪಾನಿನ ವಿವಿಧ ಕಂಪನಿಗಳು ಹೂಡಿಕೆ ಮಾಡಲು ಉತ್ಸುಕವಾಗಿವೆ’ ಎಂದರು.

ಎಚ್‌.ಡಿ.ಕುಮಾರಸ್ವಾಮಿ, ‘ತುಮಕೂರಿನಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ 519 ಎಕರೆಯನ್ನು ಮೀಸಲಿಟ್ಟಿದ್ದು, ಇಲ್ಲಿ ತಲೆ ಎತ್ತಲಿರುವ ಈ ಕೈಗಾರಿಕಾ ನಗರ ಚೆನ್ನೈ -ಬೆಂಗಳೂರು ಕೈಗಾರಿಕಾ ಕಾರಿಡಾರಿನ ಪ್ರಮುಖ ಭಾಗವಾಗಲಿದೆ. ಇಲ್ಲಿ ಭಾರಿ ಎಂಜಿನಿಯರಿಂಗ್ ಮತ್ತು ಯಂತ್ರೋಪಕರಣಗಳು, ಆಟೋಮೇಟಿವ್ ಮತ್ತು ಆಟೋ ಬಿಡಿಭಾಗಗಳು ಹಾಗೂ ಏರೋಸ್ಪೇಸ್ ಬಿಡಿಭಾಗಗಳನ್ನು ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನೀರು ಸಂಸ್ಕರಣಾ ಘಟಕ, ವಿದ್ಯುತ್ ಉಪಕೇಂದ್ರ ಸ್ಥಾಪನೆ, ನೀರು ಸರಬರಾಜು ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.