ADVERTISEMENT

ರಾಜ್ಯ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ: ದೇವೇಗೌಡ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 19:42 IST
Last Updated 16 ಅಕ್ಟೋಬರ್ 2017, 19:42 IST
ರಾಜ್ಯ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ: ದೇವೇಗೌಡ
ರಾಜ್ಯ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ: ದೇವೇಗೌಡ   

ಬೆಂಗಳೂರು: ‘ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷ ಅಧಿಕಾರ ಹಿಡಿಯುವ ಅನಿವಾರ್ಯ ಇದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ದುರಾಡಳಿತದಿಂದ ಬೇಸತ್ತಿರುವ ಜನತೆ, ಈ ಬಾರಿ ಸಿಡಿದೆದ್ದು ಜೆಡಿಎಸ್‌ ಬೆಂಬಲಿಸಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಹೆಗ್ಗಡೆನಗರ ಸಮೀಪದ ನಾರಾಯಣಪುರದಲ್ಲಿ ಮುಖಂಡ ಟಿ.ಕೆ.ಗೋಪಾಲಯ್ಯ ಸೇರಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ಹಲವು ಮುಖಂಡರ ಜೆಡಿಎಸ್‌ ಸೇರ್ಪಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಲವು ಮುಖಂಡರು ನಮ್ಮೊಂದಿಗಿದ್ದಾರೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ’ ಎಂದರು.

ADVERTISEMENT

‘ಎರಡೂ ರಾಷ್ಟ್ರೀಯ ಪಕ್ಷಗಳು ಆರ್ಥಿಕವಾಗಿ ಬಲಾಢ್ಯವಾಗಿವೆ. ಈ ಪಕ್ಷಗಳನ್ನು ಎದುರಿಸುವ ಸಾಮರ್ಥ್ಯವನ್ನು ಕಾರ್ಯಕರ್ತರು ಬೆಳೆಸಿಕೊಳ್ಳಬೇಕು.

ಮನೆ ಮನೆಗೆ ಭೇಟಿ ನೀಡಿ, ತಾವು ಪ್ರಧಾನಿಯಾಗಿದ್ದಾಗ ದೇಶಕ್ಕೆ ನೀಡಿದ ಕೊಡುಗೆ ಹಾಗೂ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.