ADVERTISEMENT

ರಾಜ್ಯ ಮುನ್ನಡೆಸುವ ಶಕ್ತಿ ದಲಿತರಿಗಿದೆ: ಬಹಿಷ್ಕೃತ ಹಿತಕಾರಿಣಿ ಅಧ್ಯಕ್ಷ ಸುರೇಂದ್ರ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 19:30 IST
Last Updated 5 ಏಪ್ರಿಲ್ 2018, 19:30 IST
ಸಭೆಯಲ್ಲಿ ಡಾ.ಎಚ್.ಆರ್.ಸುರೇಂದ್ರ ಮಾತನಾಡಿದರು. ಕಾರ್ಯಾಧ್ಯಕ್ಷ ಜೆ.ಸಿ.ಪ್ರಕಾಶ್, ಕಾರ್ಯದರ್ಶಿ ಎಸ್.ವಿಜಯಮ್ಮ, ಎಂ.ವೆಂಕಟಸ್ವಾಮಿ ಇದ್ದಾರೆ - ಪ್ರಜಾವಾಣಿ ಚಿತ್ರ
ಸಭೆಯಲ್ಲಿ ಡಾ.ಎಚ್.ಆರ್.ಸುರೇಂದ್ರ ಮಾತನಾಡಿದರು. ಕಾರ್ಯಾಧ್ಯಕ್ಷ ಜೆ.ಸಿ.ಪ್ರಕಾಶ್, ಕಾರ್ಯದರ್ಶಿ ಎಸ್.ವಿಜಯಮ್ಮ, ಎಂ.ವೆಂಕಟಸ್ವಾಮಿ ಇದ್ದಾರೆ - ಪ್ರಜಾವಾಣಿ ಚಿತ್ರ   

ಬೆಂಗಳೂರು: ದಲಿತರಿಗೂ ರಾಜ್ಯವನ್ನು ಮುನ್ನಡೆಸುವ ಶಕ್ತಿ ಇದೆ. ಆದರೆ, ನಮ್ಮನ್ನು ದುರ್ಬಲರು ಎನ್ನುವ ರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಬಹಿಷ್ಕೃತ ಹಿತಕಾರಿಣಿ ಸಭಾದ ಅಧ್ಯಕ್ಷ ಡಾ. ಎಚ್‌.ಆರ್‌.ಸುರೇಂದ್ರ ಹೇಳಿದರು.

ನಗರದ ಶಾಸಕರ ಭವನದಲ್ಲಿ ಗುರುವಾರ ಬಹಿಷ್ಕೃತ ಹಿತಕಾರಿಣಿ ಸಭಾ ಹಮ್ಮಿಕೊಂಡ ಡಾ. ಬಾಬು ಜಗಜೀವನರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಲಿತರಲ್ಲಿ ಪ್ರತಿಭೆ ಇದೆ. ಆದರೆ ಅದರ ಸದುಪಯೋಗವಾಗುತ್ತಿಲ್ಲ. ಹಾಗಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡುವಂತಾಗಬೇಕು ಎಂದರು.

ADVERTISEMENT

ದಲಿತ ದೌರ್ಜನ್ಯ ತಡೆ ಕಾಯ್ದೆ ಇದ್ದಾಗಲೂ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಏಕೆ ಈ ಕಾಯ್ದೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಪ್ರಶ್ನಿಸಿದರು.

ಆರ್‌ಪಿಐನ ಎಂ.ವೆಂಕಟಸ್ವಾಮಿ ಮಾತನಾಡಿ, ಅಂಬೇಡ್ಕರ್‌ ಅವರು ಹುಟ್ಟುಹಾಕಿದ್ದ ಬಹಿಷ್ಕೃತ ಹಿತಕಾರಿಣಿ ಸಭಾವನ್ನು ಬಲಪಡಿಸಿ, ಆ ಮೂಲಕ ದಲಿತ ಒಗ್ಗಟ್ಟಿಗೆ ಶ್ರಮಿಸಬೇಕು ಎಂದರು.

ಸಭಾದ ಕಾರ್ಯದರ್ಶಿ ಮತ್ತು ಸಂಯೋಜಕಿ ಎಸ್‌. ವಿಜಯಮ್ಮ, ಕಾರ್ಯಾಧ್ಯಕ್ಷ ಮತ್ತು ಸಂಯೋಜಕ ಜೆ.ಸಿ. ಪ್ರಕಾಶ್‌ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.