ADVERTISEMENT

ರಾಷ್ಟ್ರೀಯ ಖಾದಿ ಉತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2014, 20:29 IST
Last Updated 10 ಜನವರಿ 2014, 20:29 IST

ಬೆಂಗಳೂರು: ವಿವಿಧ ಬಗೆಯ ಖಾದಿ  ಉತ್ಪನ್ನಗಳು, ಸೂಕ್ಷ್ಮ  ಕುಸುರಿಯ ಆಲಂಕಾರಿಕ ವಸ್ತುಗಳು, ಮಕ್ಕಳನ್ನು ಸೆಳೆಯುವ ಆಕರ್ಷಕ ಗೊಂಬೆಗಳು, ಮಹಿಳೆಯರನ್ನು ಸೆಳೆಯುತ್ತಿರುವ ಬಳೆ, ಓಲೆ, ಬ್ಯಾಗ್‌ಗಳು– ಇವು ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿರುವ ಖಾದಿ ಉತ್ಸವದಲ್ಲಿ ಶುಕ್ರವಾರ ಕಂಡು ಬಂದ ದೃಶ್ಯಗಳು.

ಕರ್ನಾಟಕ ಖಾದಿ ಮತ್ತು ಗ್ರಾಮೋ­ದ್ಯೋಗ ಮಂಡಳಿಯು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿ ರುವ ‘ಖಾದಿ ಉತ್ಸವ–2014’ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ, ಮಾರಾಟ ಮೇಳವು ಖಾದಿ ಪ್ರಿಯರು,  ಸಾರ್ವಜನಿಕರನ್ನು ತನ್ನತ್ತ ಸೆಳೆ­ಯುತ್ತಿದೆ.

ಸಣ್ಣ ಕೈಗಾರಿಕೆ ಸಚಿವ ಪ್ರಕಾಶ್‌ ಬಿ.ಹುಕ್ಕೇರಿ ಹಾಗೂ   ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್‌ ಗುಂಡೂರಾವ್ ಉದ್ಘಾಟನೆಯಲ್ಲಿ ಪಾಲ್ಗೊಂಡು ಖಾದಿ ಉತ್ಪನ್ನ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.

ರೇಷ್ಮೆ ಖಾದಿಯ ಮೇಲೆ ಶೇ 25 ಮತ್ತು ಇತರೆ ಖಾದಿ ಉತ್ಪನ್ನಗಳ ಮೇಲೆ ಶೇ 35ರಷ್ಟು ರಿಯಾಯಿತಿ ಇದೆ. ಮೇಳವು ಫೆ.9ರವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.