ADVERTISEMENT

ರೆಡ್ಡಿಗೆ ಜಾಮೀನು ಇಲ್ಲ

ಬೇಲೆಕೇರಿ ಅಕ್ರಮ ಅದಿರು ಸಾಗಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 19:30 IST
Last Updated 21 ಮಾರ್ಚ್ 2014, 19:30 IST

ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರನ್ನು ಕಳ್ಳ­ಸಾಗಣೆ ಮಾಡಿರುವ ಆರೋಪ ಎದುರಿ­ಸು-­ತ್ತಿರುವ ಯಲ್ಲಾಪುರದ ಶಾಸಕ ಕೆ.ಶಿವರಾಮ್‌ ಹೆಬ್ಬಾರ್‌ ಅವರ ಪುತ್ರ ವಿವೇಕ್ ಹೆಬ್ಬಾರ್, ಅವರ ನಿಕಟವರ್ತಿ ಪ್ರಕಾಶ್ ಹೆಗಡೆ, ಹೊಸಪೇಟೆಯ ಕೆ.ಜನಾರ್ದನ ರೆಡ್ಡಿ ಮತ್ತು ಐ.ಎರ್ರಿಸ್ವಾಮಿ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.


ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರವಿ ಎಂ. ನಾಯಕ್‌ ತಿರಸ್ಕರಿಸಿ, ಆದೇಶ ಹೊರಡಿಸಿದ್ದಾರೆ. ಎಲ್ಲ ಆರೋಪಿಗಳೂ ಈ ಪ್ರಕರಣದಲ್ಲಿ ನೇರವಾಗಿ ಭಾಗಿ­ಯಾಗಿದ್ದಾರೆ. ಅವರಿಗೆ ತಿಳಿಯ­ದೆಯೇ ತಪ್ಪು ನಡೆದಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ನ್ಯಾಯಾಧೀಶರು ಆದೇಶದಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT