ಬೆಂಗಳೂರು: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ರೆಡ್ಡಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಕಾಲಾವಕಾಶ ಕೋರಿದ ಕಾರಣ, ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರು ಮುಂದೂಡಿದರು.
ಮದನಿ ಜಾಮೀನು-ಮುಂದೂಡಿಕೆ
ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಪಿಡಿಪಿ ಮುಖ್ಯಸ್ಥ ಅಬ್ದುಲ್ ನಾಸಿರ್ ಮದನಿಯ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 2 ವಾರ ಮುಂದೂಡಿದೆ. ಮದನಿಗೆ ಚಿಕಿತ್ಸೆ ನೀಡಲು ಆದ ಖರ್ಚಿನ ವಿವರ ನೀಡಲು ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.