ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ರೆಹಮಾನ್ ಖಾನ್ ಅವರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ್ದನ್ನು ಹಜ್ರತ್ ಟಿಪ್ಪು ಸುಲ್ತಾನ್ ಸಂಯುಕ್ತ ರಂಗ ಸ್ವಾಗತಿಸಿದೆ.
ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಂಗದ ಅಧ್ಯಕ್ಷ ಸರ್ದಾರ್ ಅಹಮದ್ ಖುರೇಶಿ, ‘ಅವರು ಸಾರ್ವಜನಿಕ ಚುನಾವಣೆಯಲ್ಲಿ ಗೆದ್ದು ಅಧಿಕಾರ ಪಡೆದಿಲ್ಲ. ವಕ್ಫ್ ಹಗರಣದ ಆರೋಪವೂ ಇವರ ಮೇಲಿದೆ. ಇಂತಹವರನ್ನು ರಾಜ್ಯಸಭೆಗೆ ಕಳುಹಿಸುವುದು ಸಮಂಜಸವಲ್ಲ’ ಎಂದರು.
ಕೇಂದ್ರ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದಾಗ ಖಾನ್ ಅವರು ಮುಸ್ಲಿಂ ಸಮುದಾಯಕ್ಕೆ ಯಾವುದೇ ಅನುಕೂಲ ಕಲ್ಪಿಸಿಲ್ಲ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.