ಬೆಂಗಳೂರು: ಮೂಡಲಪಾಳ್ಯ ಸಮೀಪದ ಸಂಜೀವಿನಿನಗರದಲ್ಲಿ ಲಕ್ಷ್ಮಿಕಾಂತ (38) ಎಂಬುವರು ಭಾನುವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿದ್ದ ಅವರು ಪತ್ನಿ ಪದ್ಮಾ ಮತ್ತು ಕುಟುಂಬ ಸದಸ್ಯರೊಂದಿಗೆ ಸಂಜೀವಿನಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕುಟುಂಬ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಚಂದ್ರಾಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.