
ಪ್ರಜಾವಾಣಿ ವಾರ್ತೆಬೆಂಗಳೂರು: ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ವ್ಯಕ್ತಿಯೊಬ್ಬರಿಂದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಭೂಸ್ವಾಧೀನ ಮತ್ತು ಪುನರ್ವಸತಿ (ಕಂದಾಯ) ಇಲಾಖೆ ಉಪ ಕಾರ್ಯದರ್ಶಿ ವೆಂಕಟೇಶಮೂರ್ತಿ ಮತ್ತು ಅಧೀನ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಾಗವಾರದ ಗುತ್ತಿಗೆದಾರ ಮಂಜುನಾಥ ಎಂಬುವರು ನ್ಯಾಯಾಲಯದ ಆದೇಶದ ಪ್ರಕಾರ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಈ ಇಬ್ಬರೂ ಅಧಿಕಾರಿಗಳು 50 ಸಾವಿರ ರೂಪಾಯಿ ಲಂಚ ಕೇಳಿದ್ದರು. ನಂತರ 40 ಸಾವಿರ ರೂಪಾಯಿ ಕೊಡಲು ಒಪ್ಪಿ, ಮೊದಲ ಕಂತಿನಲ್ಲಿ 20 ಸಾವಿರ ರೂಪಾಯಿ ನೀಡುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಈ ಅಧಿಕಾರಿಗಳನ್ನು ಬಂಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.