ADVERTISEMENT

ಲಕ್ಷ್ಮಿನಾರಾಯಣ ಭಟ್ಟ ಮುದ್ದುಕೃಷ್ಣ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2018, 19:55 IST
Last Updated 6 ಮಾರ್ಚ್ 2018, 19:55 IST

ಬೆಂಗಳೂರು: ಕೆ.ಎಸ್‌.ನರಸಿಂಹಸ್ವಾಮಿ ಪ್ರಶಸ್ತಿಗೆ ಕವಿ ಎನ್‌.ಎಸ್‌. ಲಕ್ಷ್ಮಿ ನಾರಾಯಣ ಭಟ್ಟ ಹಾಗೂ ಕಾವ್ಯಗಾನ ಪ್ರಶಸ್ತಿಗೆ ಸುಗಮ ಸಂಗೀತ ಗಾಯಕ ವೈ.ಕೆ. ಮುದ್ದುಕೃಷ್ಣ ಆಯ್ಕೆಯಾಗಿದ್ದಾರೆ.

‘ಪ್ರಶಸ್ತಿಯು ತಲಾ ₹ 25,000 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಜಯನಗರದ ನ್ಯಾಷನಲ್‌ ಕಾಲೇಜಿನ ಎಚ್‌. ಎನ್‌. ಕಲಾಕ್ಷೇತ್ರದಲ್ಲಿ ಇದೇ 10ರಂದು ಸಂಜೆ 5.30ಕ್ಕೆ ನಡೆಯಲಿದೆ.

ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಕೆ.ಎಸ್‌.ನರಸಿಂಹಸ್ವಾಮಿ ಟ್ರಸ್ಟ್‌ನ ಅಧ್ಯಕ್ಷ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.