ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ ಸಹ ಸದಸ್ಯರನ್ನಾಗಿ ಎಂ.ಆರ್.ಬಾಳೀಕಾಯಿ (ಧಾರವಾಡ), ಪುರುಷೋತ್ತಮ ಅಡ್ವೆ (ಉಡುಪಿ) ಹಾಗೂ ಸಂಗಪ್ಪ ಬಸವಂತಪ್ಪ ತೋಗುಣಸಿ (ಬೆಂಗಳೂರು) ಅವರನ್ನು ನೇಮಕ ಮಾಡಲಾಗಿದೆ.
ಇದೇ ಜುಲೈ 5ರಂದು ನಡೆದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಈ ಮೂವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಚಿ.ಸು. ಕೃಷ್ಣ ಸೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.