ADVERTISEMENT

ಲಾರಿ ಡಿಕ್ಕಿ: ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2012, 19:30 IST
Last Updated 10 ಮಾರ್ಚ್ 2012, 19:30 IST

ಸೂಲಿಬೆಲೆ: ಕೋಲಾರದ ಕಡೆಯಿಂದ ಬಂದ ಲಾರಿ,ರಸ್ತೆಬದಿಯಲ್ಲಿ ನಡೆದು ಹೋಗುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ  ತಾಲ್ಲೂಕಿನ ತಾವರೆಕೆರೆ ಸಮೀಪದ ಚಿಕ್ಕನಹಳ್ಳಿ ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

 ಬೆಳಿಗ್ಗೆ ತಾವರೆಕೆರೆಯ ಸರ್ಕಾರಿ ಪ್ರೌಢಶಾಲೆಗೆ ತೆರಳಲು ಶಶಿಕುಮಾರ್ (15) ಚಿಕ್ಕನಹಳ್ಳಿ ಗೇಟ್ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.  ನಂದಗುಡಿ ಠಾಣೆಯವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.