ADVERTISEMENT

ಲಾಲ್‌ಬಾಗ್‌ನಲ್ಲಿ ವಾಹನ ನಿಲುಗಡೆ: ಸಮಿತಿ ರಚಿಸಿ ಕ್ರಮ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2012, 19:30 IST
Last Updated 8 ನವೆಂಬರ್ 2012, 19:30 IST

ಬೆಂಗಳೂರು: ಲಾಲ್‌ಬಾಗ್ ಉದ್ಯಾನವನದಲ್ಲಿ ವಾಹನ ನಿಲುಗಡೆ ನಿಲ್ದಾಣ ಬೇಕೇ ಅಥವಾ ಬೇಡವೇ ಎಂಬುದನ್ನು ಅಧ್ಯಯನ ನಡೆಸಲು ಬುದ್ಧಿಜೀವಿಗಳನ್ನು ಒಳಗೊಂಡ ಮೂವರ ಸಮಿತಿ ರಚಿಸಲಾಗುವುದು. ಅದು ಕೊಡುವ ವರದಿಯನ್ನಾಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತೋಟಗಾರಿಕೆ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದರು.

ಲಾಲ್‌ಬಾಗ್ ಉದ್ಯಾನವನದಲ್ಲಿ ವಾಹನ ನಿಲುಗಡೆ ನಿಲ್ದಾಣ ನಿರ್ಮಾಣಕ್ಕೆ ಕೆಲವರಿಂದ ವಿರೋಧ ಬಂದ ಕಾರಣ ಸದ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ವಾಹನ ನಿಲುಗಡೆ ನಿಲ್ದಾಣಕ್ಕಾಗಿ ಇದುವರೆಗೂ 20 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ ಎಂದೂ ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.