ಬೆಂಗಳೂರು:ಯುಜಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ, ಬೆಂಳೂರು ವಿಶ್ವವಿದ್ಯಾಲಯ, ಬೆಂಗಳೂರು ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರಿಗೆ ಲಿಂಗ ಜಾಗೃತಿ ಬಗ್ಗೆ ಒಂದು ವಾರದ ಕಾರ್ಯಕ್ರಮ ಸೋಮವಾರ ಆರಂಭವಾಯಿತು.
ಬೆಂಗಳೂರು ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ಪ್ರೊ.ಎಂ.ಜೆ.ವಿನೋದ್ ಮಾತನಾಡಿ, ಲಿಂಗ ಜಾಗೃತಿಯು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಅತ್ಯಗತ್ಯ. ದೇಶದಲ್ಲಿ ರಾಜಕೀಯ, ಆರ್ಥಿಕತೆ ಮತ್ತು ಸಾಮಾಜಿಕವಾಗಿ ಲಿಂಗ ಸಮಾನತೆ ಅಗತ್ಯ ಎಂದರು.
ಯುಜಿಸಿ ಮಾನವ ಸಂಪನ್ಮೂಲ ಕೇಂದ್ರದ ನಿರ್ದೇಶಕ ಪ್ರೊ.ಸಿ.ಶ್ರೀನಿವಾಸ್ ಮಾತನಾಡಿದರು.ಡಾ. ಅರುಣ್.ಎಸ್ ವೈದ್ಯ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.