ಬೆಂಗಳೂರು: ಬಹುಮಹಡಿ ಕಟ್ಟಡದ ವಿಸ್ತೀರ್ಣ ಹೆಚ್ಚಿಸುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ರಸ್ತೆಯನ್ನು ಕಾನೂನು ಉಲ್ಲಂಘಿಸಿ ವಿಸ್ತರಿಸಿದ ಆರೋಪ ಎದುರಿಸುತ್ತಿರುವ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ, ಐಎಎಸ್ ಅಧಿಕಾರಿ ಭರತ್ಲಾಲ್ ಮೀನಾ, ಡಿಎಲ್ಎಫ್ ಹೋಮ್ಸ ಸಂಸ್ಥೆ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.
ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಹೆಚ್ಚಿನ ಜಾಗ ಕಲ್ಪಿಸುವ ಉದ್ದೇಶದಿಂದ ಲಿಂಬಾವಳಿ ಅವರು ಬಿಬಿಎಂಪಿಗೆ ಸೂಚನೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಬೇಗೂರಿನಲ್ಲಿ ಈ ಅಪಾರ್ಟ್ಮೆಂಟ್ ನಿರ್ಮಿಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಈ ಆದೇಶ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.