ADVERTISEMENT

ಲೋಕಾಯುಕ್ತ ತನಿಖೆಯ ತಡೆ ತೆರವು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2013, 19:56 IST
Last Updated 17 ಏಪ್ರಿಲ್ 2013, 19:56 IST

ಬೆಂಗಳೂರು: ಬೆನ್ನಿಗಾನಹಳ್ಳಿಯಲ್ಲಿ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಅಕ್ರಮವಾಗಿ ಕೈಬಿಟ್ಟ ಪ್ರಕರಣದಲ್ಲಿ ಕಾಂಗ್ರೆಸ್‌ನ ಡಿ.ಕೆ. ಶಿವಕುಮಾರ್ ವಿರುದ್ಧ ನಡೆಯುತ್ತಿರುವ ಲೋಕಾಯುಕ್ತ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ, ಈ ಆದೇಶ ನೀಡಿದರು. ಆದರೆ, ವಿಚಾರಣೆ ಸಂದರ್ಭದಲ್ಲಿ ಖುದ್ದು ಹಾಜರಾತಿಯಿಂದ ಶಿವಕುಮಾರ್ ಅವರಿಗೆ ವಿನಾಯಿತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.