ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕುವಿಂದ ಇರಿದಿದ್ದ ಆರೋಪಿ ತೇಜ್ರಾಜ್ ಶರ್ಮಾನನ್ನು (32) ಮತ್ತೆ ಮೂರು ದಿನಗಳ ವರೆಗೆ (ಮಾ. 15ರವರೆಗೆ) ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
ಮಾ. 7ರಂದು ನಡೆದಿದ್ದ ಘಟನೆ ಸಂಬಂಧ ಆತನನ್ನು ಬಂಧಿಸಿದ್ದ ವಿಧಾನಸೌಧ ಪೊಲೀಸರು, ಅಂದು ರಾತ್ರಿಯೇ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಐದು ದಿನಗಳವರೆಗೆ ಆತನನ್ನು ಕಸ್ಟಡಿಗೆ ಪಡೆದುಕೊಂಡಿದ್ದರು. ತನಿಖೆ ಜವಾಬ್ದಾರಿ ವಹಿಸಿಕೊಂಡಿದ್ದ ಸಿಸಿಬಿ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದರು.
ಕಸ್ಟಡಿ ಅವಧಿ ಮುಗಿದಿದ್ದರಿಂದ ಆತನನ್ನು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದ ಪೊಲೀಸರು, ಪುನಃ ಕಸ್ಟಡಿಗೆ ನೀಡುವಂತೆ ಕೋರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.