ಬೆಂಗಳೂರು: ದೊಡ್ಡನೆಕ್ಕುಂದಿ ವಾರ್ಡ್ನ ತೂಬರಹಳ್ಳಿಯಲ್ಲಿ ಷೆಡ್ ನಿರ್ಮಿಸಿಕೊಂಡು ನೆಲೆಸಿರುವ ವಲಸಿಗರ ಬೆಂಬಲಕ್ಕೆ ನಟ ಚೇತನ್ ಮುಂದಾಗಿದ್ದಾರೆ.
ಷೆಡ್ನಿಂದ ನಿವಾಸಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದರು.
ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಚೇತನ್, ‘ನಿಮಗೆ ಯಾವುದೆ ತೊಂದರೆ ಆಗದಂತೆ ನಾವು ನಿಮ್ಮ ಜೊತೆ ಇರುತ್ತೇವೆ’ ಎಂದು ಭರವಸೆ ನೀಡಿದರು. ನಿವಾಸಿಗಳ ಹಿತರಕ್ಷಣೆ ಬಗ್ಗೆ ಬಿಬಿಎಂಪಿ ಮೇಯರ್ ಜೊತೆ ಮಾತನಾಡುವುದಾಗಿ ತಿಳಿಸಿದರು.
ಈ ವೇಳೆ ಜನವಾದಿ ಮಹಿಳಾ ಸಂಘಟನೆಯ ಉಪಾದ್ಯಕ್ಷೆ ಗೌರಮ್ಮ, ಸಿಪಿಐಎಂ ಮುಖಂಡ ಗೋಪಾಲಗೌಡ ಅವರಿಗೆ ಸಾಥ್ ನೀಡಿದರು. ಈ ಸಂದರ್ಭ ಮಾತನಾಡಿದ ಗೌರಮ್ಮ, ‘ನಮ್ಮ ರಾಜ್ಯದ ಜನರು ಬೇರೆ ರಾಜ್ಯಗಳಲ್ಲಿ ನೆಲೆಸಿರುವಂತೆ ಇವರು ಸಹ ಉದ್ಯೋಗ ಅರಸಿ ಬಂದು ಇಲ್ಲಿ ನೆಲೆಸಿದ್ದಾರೆ. ಇವರು ನೆಲೆಸಿರುವ ಜಾಗಕ್ಕೆ ಬಾಡಿಗೆಯನ್ನೂ ನೀಡಿದ್ದಾರೆ. ಇವರನ್ನು ಒಕ್ಕಲೆಬ್ಬಿಸಿ ಜಾಗ ಖಾಲಿ ಮಾಡಿಸುವುದರ ಹಿಂದೆ ಕೆಲ ಭೂ ಮಾಫಿಯಾದವರ ಕೈವಾಡ ಇದೆ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.