ADVERTISEMENT

ವಾಯುಪಡೆ ನಿರ್ಗಮನ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2013, 19:59 IST
Last Updated 1 ಜೂನ್ 2013, 19:59 IST

ಬೆಂಗಳೂರು: `ವಾಯುಪಡೆಯ ವಿಮಾನ ಮತ್ತು ಅದರ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅವುಗಳ ನಿರ್ವಹಣೆಯಲ್ಲಿ ಎಂಜಿನಿಯರ್‌ಗಳ ಪಾತ್ರ ದೊಡ್ಡದು' ಎಂದು ಏರ್ ಮಾರ್ಷಲ್ ಅರುಪ್ ರಹಾ ಹೇಳಿದರು.

ಜಾಲಹಳ್ಳಿಯ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ಈಚೆಗೆ ನಡೆದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

`ಮುಂದೆ ಗುರಿಯನ್ನಿಟ್ಟುಕೊಂಡು ಪ್ರಯತ್ನವನ್ನು ಮಾಡಿದರೆ ಯಶಸ್ಸು ದೊರೆಯುತ್ತದೆ. ಮುಖ್ಯವಾಗಿ ಪರಿಶ್ರಮ ಪಡಬೇಕು. ಯಾವುದೇ ಸವಾಲಿಗೂ ಸಿದ್ಧರಾಗಿರಬೇಕು' ಎಂದು ಹೇಳಿದರು.

ಒಟ್ಟು 118 ಅಧಿಕಾರಿಗಳು ತರಬೇತಿ ಪಡೆದು ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಅದರಲ್ಲಿ 28 ಮಹಿಳಾ ಅಧಿಕಾರಿಗಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.