ADVERTISEMENT

ವಾರ್ಷಿಕೋತ್ಸವ ಸಮಾರಂಭ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ಬೆಂಗಳೂರು: ನಾಟ್ಯಪ್ರಿಯ ನೃತ್ಯ ತರಬೇತಿ ಸಂಸ್ಥೆಯ 37ನೇ ವಾರ್ಷಿಕೋತ್ಸವ ಹಾಗೂ ನೃತ್ಯ ಕ್ಷೇತ್ರ `ಕಸ್ತೂರಿ ರಂಗ ಮಂದಿರ~ದ  ಉದ್ಘಾಟನಾ ಸಮಾರಂಭವನ್ನು ಇದೇ 15 ಮತ್ತು 16ರಂದು ಹಮ್ಮಿಕೊಂಡಿದೆ ಎಂದು ನೃತ್ಯ ಕಲಾವಿದೆ ಪದ್ಮಿನಿ ರಾಮಚಂದ್ರನ್ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾನಾಡಿದ ಅವರು, 16ರಂದು ಹೊಯ್ಸಳ ನಗರದ ಟಿ.ಸಿ.ಪಾಳ್ಯ  ಮುಖ್ಯರಸ್ತೆಯಲ್ಲಿರುವ ನೃತ್ಯಕ್ಷೇತ್ರದಲ್ಲಿ ಕಸ್ತೂರಿ ರಂಗ ಮಂದಿರವನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಉದ್ಘಾಟಿಸಲಿದ್ದಾರೆ.
 
ಕಾರ್ಯಕ್ರಮದಲ್ಲಿ ನಾಟ್ಯಪ್ರಿಯಾ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಸ್ರೊ ಮಾಜಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್, ಹಿರಿಯ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.