ಪೀಣ್ಯ ದಾಸರಹಳ್ಳಿ: ನಮ್ಮ ಸಾಮರ್ಥ್ಯದ ಬಗ್ಗೆ ನಂಬಿಕೆಯಿಟ್ಟು ಪ್ರಯತ್ನ ಮಾಡಿದರೆ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಮಹಾವೀರ್ ಜೈನ್ ಕಾಲೇಜು ಮುಖ್ಯಸ್ಥ ಡಾ. ಎಸ್.ಎನ್. ನಟರಾಜ್ ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.
ವಿದ್ಯಾರ್ಥಿಗಳು ಸ್ವಾಭಿಮಾನ ರೂಢಿಸಿಕೊಳ್ಳುವ ಜತೆಗೆ ರಾಷ್ಟ್ರದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದರು.
ದಾಸರಹಳ್ಳಿ ಹಾವನೂರು ಬಡಾವಣೆಯ ಸೌಂದರ್ಯ ಪಿಯು ಕಾಲೇಜಿನಲ್ಲಿ ಸಂಭ್ರಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸೌಂದರ್ಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸೌಂದರ್ಯ ಮಂಜಪ್ಪ, ನಿರ್ದೇಶಕರಾದ ಪ್ರೊ.ಜಯರಾಮಶೆಟ್ಟಿ, ಸುನೀತಾ ಮಂಜಪ್ಪ, ಪ್ರಾಂಶುಪಾಲರಾದ ಅನಿಲ್ ಕುಮಾರ್, ನಾಗರಾಜಪ್ಪ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.