
ಪ್ರಜಾವಾಣಿ ವಾರ್ತೆಬೆಂಗಳೂರು: ಬಿಬಿಎಂಪಿ ಟಸ್ಕರ್ಟೌನ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಕೆ.ಆರ್.ಮಾರುಕಟ್ಟೆಯನ್ನು ಸ್ವಚ್ಛಗೊಳಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮೇಯರ್ ಬಿ.ಎಸ್.ಸತ್ಯನಾರಾಯಣ ಅವರು, ಮಾರುಕಟ್ಟೆಯ ವಾಹನ ನಿಲುಗಡೆ ಸ್ಥಳ ಹಾಗೂ ರಸ್ತೆಗಳನ್ನು ಶುಚಿಯಾಗಿಟ್ಟುಕೊಳ್ಳಲು ವ್ಯಾಪಾರಿಗಳು ಮುಂದಾಗಬೇಕು. ಅಲ್ಲದೇ ಮಾರುಕಟ್ಟೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಇಲ್ಲಿನ ವ್ಯಾಪಾರಿಗಳು ಬಿಬಿಎಂಪಿ ಜತೆ ಸಹಕರಿಸಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.