ಬೆಂಗಳೂರು: ಎಂ.ಕೆ.ಜಯಮ್ಮ ಮತ್ತು ಬಿ. ಎಸ್. ಆರ್. ಶಾಸ್ತ್ರಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶೇ 80ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪಿಯುಸಿ, ಡಿಪ್ಲೊಮಾ, ಆಯುರ್ವೇದ, ತಾಂತ್ರಿಕ, ವೈದ್ಯಕೀಯ, ಕಾನೂನು, ದಂತ ವಿಜ್ಞಾನ, ಪಶುವೈದ್ಯಕೀಯ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಫೆ. 28ರ ಒಳಗೆ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವು ಏಪ್ರಿಲ್ 12ರಂದು ಬೆಂಗಳೂರಿನ ‘ಯವನಿಕಾ’ ಸಭಾಂಗಣದಲ್ಲಿ ನಡೆಯಲಿದೆ.
ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ. ಎನ್.ವೆಂಕಟಾಚಲಯ್ಯ, ರಾಮಕೃಷ್ಣ ಮಠದ ವೀರೇಶಾನಂದ ಸ್ವಾಮೀಜಿ, ಕೇಂದ್ರ ಸಚಿವ ಅನಂತಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಂಪರ್ಕಕ್ಕೆ: 080– 2649 4207. ಇ–ಮೇಲ್: bsrsastrytrust@gmail.com ವೆಬ್ಸೈಟ್: www.bsrsastry.org
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.