ADVERTISEMENT

ವಿದ್ಯುತ್‌ ಪ್ರವಹಿಸಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 19:30 IST
Last Updated 21 ಅಕ್ಟೋಬರ್ 2017, 19:30 IST

ಬೆಂಗಳೂರು: ಕೆ.ಆರ್.ಪುರ ಸಮೀಪದ ಕೃಷ್ಣಾನಗರದಲ್ಲಿ ಕಟ್ಟಡದ ಕಾಮಗಾರಿ ವೇಳೆ ವಿದ್ಯುತ್‌ ಪ್ರವಹಿಸಿ ಚನ್ನಸಂದ್ರದ ವಿ.ನಾಗಭೂಷಣ್‌ (33) ಎಂಬುವರು ಮೃತಪಟ್ಟಿದ್ದಾರೆ.

‘ಪುರುಷೋತ್ತಮ್‌ ಎಂಬುವರಿಗೆ ಸೇರಿದ ಕಟ್ಟಡದ ಮೂರನೇ ಮಹಡಿಯಲ್ಲಿ ಮೋಲ್ಡಿಂಗ್‌ಗಾಗಿ ಕಂಬಿ ಕಟ್ಟುವ ಕೆಲಸದಲ್ಲಿ ನಾಗಭೂಷಣ್‌ ಹಾಗೂ ಗಜೇಂದ್ರ ನಿರತರಾಗಿದ್ದರು. ಮನೆ ಮೇಲೆ ಹಾದು ಹೋಗಿರುವ ಹೈಟೆನ್ಷನ್‌ ತಂತಿಗೆ ಕಂಬಿಯು ತಗುಲಿದೆ. ಇದರಿಂದ ವಿದ್ಯುತ್‌ ಪ್ರವಹಿಸಿದ್ದು, ನಾಗಭೂಷಣ್‌ ಸುಟ್ಟು ಕರಕಲಾಗಿದ್ದಾರೆ. ಗಜೇಂದ್ರ ಅವರಿಗೂ ಸುಟ್ಟ ಗಾಯಗಳಾಗಿವೆ. ಪುರುಷೋತ್ತಮ್‌ ಹಾಗೂ ‌ಮೇಸ್ತ್ರಿ ರವಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

‘ಕಟ್ಟಡದ ಮಾಲೀಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಈ ಅವಘಡ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.