ADVERTISEMENT

ವಿಷ ಸೇವಿಸಿ ದಂಪತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 21 ಮೇ 2018, 19:20 IST
Last Updated 21 ಮೇ 2018, 19:20 IST

ಚಿತ್ರದುರ್ಗ: ತಾಲ್ಲೂಕಿನ ಮಾಡನಾಯಕನಹಳ್ಳಿಯಲ್ಲಿ ವಿಷ ಸೇವಿಸಿ ರೈತ ದಂಪತಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುಡ್ಡಪ್ಪ (40) ಹಾಗೂ ಭಾರತಿ (35) ಮೃತ ದಂಪತಿ.

ಗುಡ್ಡಪ್ಪ ಅವರಿಗೆ ಒಂದೂವರೆ ಎಕರೆ ಜಮೀನು ಇತ್ತು. ಪ್ರತಿ ವರ್ಷ ಈರುಳ್ಳಿ ಬೆಳೆಯುತ್ತಿದ್ದರು. ಬೆಳೆಗೆ ಉತ್ತಮ ಬೆಲೆ ಸಿಗದೇ ಇರುವುದರಿಂದ ಅವರು ಬೇಸರಗೊಂಡಿದ್ದರು. ಗ್ರಾಮದ ಸಮೀಪದಲ್ಲಿದ್ದ ಜಮೀನಿಗೆ ತೆರಳಿ ದಂಪತಿ ವಿಷ ಸೇವಿಸಿದ್ದಾರೆ. ಮರಣಪತ್ರ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.