ADVERTISEMENT

ವೈದ್ಯನಾಥ ಸಮಿತಿ: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2012, 19:30 IST
Last Updated 19 ಜೂನ್ 2012, 19:30 IST

ಬೆಂಗಳೂರು: ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಗೂ ವಕೀಲರ ನಡುವೆ ನಗರ ಸಿವಿಲ್ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ಮಾರ್ಚ್ 2ರಂದು ಸಂಭವಿಸಿದ ಅಹಿತಕರ ಘಟನೆಗಳ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರ್.ಜಿ. ವೈದ್ಯನಾಥ ಸಮಿತಿಯ ಎದುರು ಪ್ರಮಾಣ ಪತ್ರಗಳನ್ನು ಸಲ್ಲಿಸಲು ಇದೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಆಯೋಗದ ಎದುರು ಇದೇ 8ರೊಳಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಈ ಮೊದಲು ಸೂಚಿಸಲಾಗಿತ್ತು. ಆದರೆ ಪ್ರಮಾಣಪತ್ರ ಸಲ್ಲಿಸಲು ಅಗತ್ಯವಿರುವ ಮಾಹಿತಿ ಸಂಗ್ರಹಣಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂಬ ಕಾರಣ ನೀಡಿ, ಅವಧಿ ವಿಸ್ತರಿಸಲು ಪೊಲೀಸ್ ಇಲಾಖೆ ಮನವಿ ಮಾಡಿತ್ತು ಎಂದು ಆಯೋಗದ ಕಾರ್ಯದರ್ಶಿ ಎಂ.ಜೆ. ಇಂದ್ರಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಪರವಾಗಿ ವಾದ ಮಂಡಿಸಲು ಸರ್ಕಾರ ಇನ್ನೂ ವಕೀಲರನ್ನು ನೇಮಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಮಾಣಪತ್ರ ಸಲ್ಲಿಸಲು 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೊನೆಯ ದಿನ ಸಂಜೆ ನಾಲ್ಕು ಗಂಟೆಗೂ ಮುನ್ನ ಸಂಬಂಧಪಟ್ಟವರು ಪ್ರಮಾಣಪತ್ರ ಸಲ್ಲಿಸಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.