ADVERTISEMENT

ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ: ಎನ್‌.ನಾಗರಾಜು

​ಪ್ರಜಾವಾಣಿ ವಾರ್ತೆ
Published 9 ಜನವರಿ 2014, 19:30 IST
Last Updated 9 ಜನವರಿ 2014, 19:30 IST

ಹೊಸಕೋಟೆ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ತಾಲ್ಲೂಕಿಗೆ ರೂ16 ಕೋಟಿ ಮಂಜೂರಾ­ಗಿದ್ದು, ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎನ್.ನಾಗರಾಜು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಪಟ್ಟಣದ ಜಿಕೆಬಿಎಂಎಸ್ ಶಾಲೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ  ತಾಲ್ಲೂಕು ಮಟ್ಟದ ‘ಕಲಿಕೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಬೈಲಾಂಜಿನಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಮೀಉಲ್ಲಾ, ಪುರಸಭೆ ಸದಸ್ಯ ಡಿ.ಕೆ.ನಾಗರಾಜ್ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.