ADVERTISEMENT

ಶಾಲಾ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2017, 20:16 IST
Last Updated 10 ಜೂನ್ 2017, 20:16 IST
ಎನ್‌.ನಾಗರಾಜು ಹಾಗೂ ಬಿ.ಎನ್‌. ವಿಜಯಕುಮಾರ್‌ ಅವರು ವಿದ್ಯಾರ್ಥಿನಿಯರಿಗೆ ಸೈಕಲ್‌ಗಳನ್ನು ವಿತರಿಸಿದರು  –ಪ್ರಜಾವಾಣಿ ಚಿತ್ರ
ಎನ್‌.ನಾಗರಾಜು ಹಾಗೂ ಬಿ.ಎನ್‌. ವಿಜಯಕುಮಾರ್‌ ಅವರು ವಿದ್ಯಾರ್ಥಿನಿಯರಿಗೆ ಸೈಕಲ್‌ಗಳನ್ನು ವಿತರಿಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಬಾಂಧವ ಸಂಸ್ಥೆ ವತಿಯಿಂದ ಜಯನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸರ್ಕಾರಿ ಶಾಲೆಯ 100 ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್‌ಗಳನ್ನು ವಿತರಿಸಲಾಯಿತು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 1,000 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. 2,000 ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು.

ಶಾಸಕ ಬಿ.ಎನ್. ವಿಜಯ ಕುಮಾರ್, ‘ಈ ಹಿಂದೆ ಬಡ ಮಕ್ಕಳಿಗೆ ಶಿಕ್ಷಣ ಗಗನಕುಸುಮವಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಶಿಕ್ಷಣಕ್ಕಾಗಿ ಅನೇಕ ಸಂಘ–ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತಿವೆ. ಇದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಬಾಂಧವ ಸಂಸ್ಥೆಯ ಅಧ್ಯಕ್ಷ ಎನ್. ನಾಗರಾಜು, ‘ಬಡತನದಿಂದಾಗಿ ಎಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಂತಹವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು­

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.